dtvkannada

ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿಗಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ.

ಸಾತಗಳ್ಳಿ ಲೇಔಟ್ ನ ದಂಪತಿಗಳಾದ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಸಾಲಕ್ಕೆ ಹೆದರಿ ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಉದಯಗಿರಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!