dtvkannada

'; } else { echo "Sorry! You are Blocked from seeing the Ads"; } ?>

ಮಡಿಕೇರಿ: ಐದಡಿ ಉದ್ದದ ಪುಟ್ಟದಾದ ಕೋಣೆ. ಕಿಟಕಿ ಬಂದ್. ಬಾಗಿಲು ಬಂದ್. ಉಸಿರುಗಟ್ಟಿಸುವ ಕೋಣೆಯೊಳಗೊಂದು ಪುಟ್ಟ ಜೀವದ ನರಳಾಟ. ಅಬ್ಬಾ! ನೋಡಿದ್ರೆ ಎಂಥವರ ಕರುಳು ಕೂಡಾ ಚುರುಕ್ ಅನ್ನದಿರದು. ಸರಿಯಾಗಿ ಮಾತು ಬರುತ್ತಿಲ್ಲ, ಏನೋ ಹೇಳಬೇಕು. ಆದರೆ ಅದನ್ನು ಹೇಳೋದಕ್ಕಾಗ್ತಿಲ್ಲ. ತನ್ನ ತೊದಲು ಮಾತಿನಲ್ಲೇ ಮನದೊಳಗಿನ ಭಾವನೆಯನ್ನ ವ್ಯಕ್ತಪಡಿಸೋಕೆ ಮುಂದಾದ್ರೂ ಅದು ಸಾಧ್ಯವಾಗುತ್ತಿಲ್ಲ. ಈ ಮುಗ್ದ ಹೆಣ್ಣು ಮಗಳ ಈ ಸ್ಥಿತಿಗೆ ಕಾರಣ ಈಕೆಯ ಪೋಷಕರೇ ಎಂಬೂದು ದೊಡ್ಡ ದುರಂತ.

ಇಂಥದ್ದೊಂದು ಅಮಾನವೀಯ, ಕರುಳು ಹಿಂಡುವ ಘಟನೆ ನಡೆದದ್ದು ಮಡಿಕೇರಿ ಸಮೀಪದ ಗಾಳಿಬೀಡು ಗ್ರಾಮದಲ್ಲಿ. ಈ ಯುವತಿಗೆ ಸುಮಾರು 27 ವರ್ಷ ಪ್ರಾಯ. ಈಕೆಯ ತಂದೆ ಧನಂಜಯ, ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಏಳೆಂಟು ವರ್ಷದಿಂದ ಇವಳಿಗೆ ಈ ಕೋಣೆಯೇ ಪ್ರಪಂಚ. ಈಕೆಯ ಊಟ, ಶೌಚ, ನಿದ್ದೆ ಎಲ್ಲವೂ ಇಲ್ಲೆ‌ ನಡೆಯುತ್ತದೆ.

'; } else { echo "Sorry! You are Blocked from seeing the Ads"; } ?>

ಹತ್ತು ವರ್ಷದ ಹಿಂದೆ ತನ್ನ ಪ್ರೀತಿಯ ಅಮ್ಮ ಕಣ್ಣೆದುರೇ ಪ್ರಾಣ ಬಿಟ್ಟಿದ್ದು ನೋಡಿ ಉಂಟಾದ ಮಾನಸಿಕ ಆಘಾತ ಮುಂದೆ ಇವಳನ್ನು ಸಹಜ ಸ್ಥಿತಿಗೆ ತರಲೇ ಇಲ್ಲ. ಚೇತರಿಕೆಗೆ ಬೇಕಾದ ಆರೈಕೆ, ಪ್ರೀತಿಯೂ ಈಕೆಗೆ ಸಿಗಲಿಲ್ಲ ಅನ್ನುತ್ತಾರೆ ನೆರೆಹೊರೆಯವರು. ಆರಂಭದಲ್ಲೊಮ್ಮೆ ಚಿಕಿತ್ಸೆ ಕೊಡಿಸೋಕೆ ಮುಂದಾದ ತಂದೆ ನಂತರದಲ್ಲಿ ಈಕೆಯ ಅಸಹಜ ವರ್ತನೆಯಿಂದ ಮನೆಯೊಳಗೆ ಹೀಗೆ ಕೂಡಿ ಹಾಕಿದ್ದಾರಂತೆ.

ಹಲವು ವರ್ಷದಿಂದ ಈ ಮುಗ್ದ ಬಾಲಕಿಯ ಈ ಸ್ಥಿತಿಯ ಬಗ್ಗೆ ಅಕ್ಕಪಕ್ಕದ ಸಾರ್ವಜನಿಕರು ಸರ್ಕಾರದ ವ್ಯವಸ್ಥೆಗಳಿಗೆ ಮಾಹಿತಿ ನೀಡಿದ್ರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಗೆ ಈ ಬಗ್ಗೆ ಸಮಾಜ ಸೇವಕ ಮಾದೇಟಿರ ತಿಮ್ಮಯ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಮಹಿಳಾ ಪೊಲೀಸ್ ಠಾಣೆಯ ಸಹಕಾರದೊಂದಿಗೆ ಅಧಿಕಾರಿಗಳು ಧನಂಜಯ ಅವರ ಮನೆಗೆ ತೆರಳಿ ನೋಡಿದಾಗಲೇ ಗೊತ್ತಾಗಿದ್ದು ಈಕೆಯ ಕರಾಳ ಸ್ಥಿತಿ.

'; } else { echo "Sorry! You are Blocked from seeing the Ads"; } ?>

ಪುಟ್ಟ ಕೋಣೆಯಲ್ಲಿ ಒಬ್ಬಳೇ ಇದ್ದ ಯುವತಿಗೆ ಮೈಯಲ್ಲಿ ಹಳೆಯ ಬಟ್ಟೆ, ಒಂದು ಚಾಪೆ ಬಿಟ್ಟರೆ ಬೇರೇನೂ ಇರಲಿಲ್ಲ. ಕನಿಷ್ಟ ಹೊದ್ದುಕೊಳ್ಳೋದಕ್ಕೆ ಕಂಬಳಿಯೂ ಈಕೆಗೆ ಇರಲಿಲ್ಲ. ಸಣ್ಣದೊಂದು ಕಿಟಕಿ ಇದ್ರೂ, ಅದೂ ಬಂದ್ ಆಗಿತ್ತು. ಈಕಡೆಯಿಂದ ಬಾಗಿಲು ಬಂದ್ ಮಾಡಿ ಲೈಟ್ ಆಫ್ ಮಾಡಿದ್ರೆ ಸಂಪೂರ್ಣ ಕತ್ತಲೆಯ ಕೂಪ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಡಳಿತಾಧಿಕಾರಿ ಪ್ರಭಾವತಿ ಮಾತನಾಡಿಸಿದಾಗ ಜೋರಾಗಿ ಅಳೋದಕ್ಕೆ ಶುರುಮಾಡಿದ್ದಳು ಈಕೆ. ಮನೆಯಲ್ಲಿದ್ದ ಯುವತಿಯ ತಂದೆಯ ಎರಡನೇ ಪತ್ನಿ ಹಾಗೂ ಮಗಳನ್ನು ಎಷ್ಟೇ ವಿಚಾರಿಸಿದ್ರೂ, ನಿಜಾಂಶ ಗೊತ್ತಾಗಲಿಲ್ಲ. ಇದೀಗ ಆಕೆಯನ್ನು ರಕ್ಷಣೆ ಮಾಡಿರುವ ಅಧಿಕಾರಿಗಳು ಯುವತಿಯನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಯುವತಿ ಈ ರೀತಿ ಆಗಲು ಕಾರಣವೇನು? ಪೋಷಕರು ಕತ್ತಲ ಕೋಣೆಯಲ್ಲಿ ಏಕೆ ಇಟ್ಡಿದ್ದರು? ಆರೋಗ್ಯ ಕಾರ್ಯಕರ್ತೆಯರು ಏಕೆ ನಿರ್ಲಕ್ಷ್ಯ ಮಾಡಿದ್ದರು? ಎಂಬುವುದರ ಬಗ್ಗೆ ಸೂಕ್ತ ತನಿಖೆ ಆಗಬೇಕಿದೆ. ಜೊತೆಗೆ ಸೂಕ್ತ ಚಿಕಿತ್ಸೆ ನೀಡಿ ಈಕೆ ಎಲ್ಲರಂತಾಗಲು ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಲಿ ಎಂಬುದು ಎಲ್ಲರ‌ ಆಶಯ.

ವರದಿ: ಗೋಪಾಲ್ ಸೋಮಯ್ಯ

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!