ಬಂಟ್ವಾಳ: ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಇಂದು ನಡೆದಿದೆ.
![](http://dtvkannada.in/wp-content/uploads/2022/01/IMG-20220129-WA0027-1024x955.jpg)
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಎಂದು ಗುರುತಿಸಲಾಗಿದೆ.
ಪ್ರಗತಿಪರ ಕೃಷಿಕರಾಗಿದ್ದ ಇವರು, ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ.
![](http://dtvkannada.in/wp-content/uploads/2022/01/IMG-20220129-WA0026-1024x615.jpg)
ಮೃತದೇಹವನ್ನು ಸಾರ್ವಜನಿಕರು ಮೆಲೆತ್ತಿದ್ದು ಶವದ ಗುರುತನ್ನು ತನ್ನ ಮಗನೇ ಬಂದು ಗುರುತು ಪತ್ತೆ ಹಚ್ಚುವ ಮನಕಳುಕುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.