dtvkannada

ಪುತ್ತೂರು: ಆಟೋ ರಿಕ್ಷಾ ಮತ್ತು ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತ ದುರ್ದೈವಿಯನ್ನು ಪ್ರವೀನ್ ದೇರ್ಲ(32) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ರಿಕ್ಷಾದಲ್ಲಿ ಕೆಲಸಕ್ಕೆ ಹೊರಟಿದ್ದಾಗ ಮಾಡಾವು ಸಮೀಪದ ಕೆಯ್ಯೂರು ನೆಟ್ಟಳ ಬಳಿ ಜೀಪ್ ಡಿಕ್ಕಿ ಹೊಡೆದಿತ್ತು. ದುರ್ಘಟನೆಯಲ್ಲಿ ರಿಕ್ಷಾ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿತ್ತು.

ಗಂಭೀರ ಗಾಯಗೊಂಡಿದ್ದ ಮೂವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾದರೂ, ಪ್ರವೀನ್ ಮಾತ್ರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ, ತಾಯಿ, ಸಹೋದರ, ಬಂಧು ಬಳಗವನ್ನು ಅಗಲಿದ್ದಾರೆ

By dtv

Leave a Reply

Your email address will not be published. Required fields are marked *

error: Content is protected !!