dtvkannada

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನಾಳೆ ನಾಲ್ಕು ಜೋಡಿ ಬಡ ಹೆಣ್ಣುಮಕ್ಕಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ಹಲವಾರು ಯಶಸ್ವಿ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಸಾರಥ್ಯವಹಿಸಿದ ಕೊಡುಗೈ ಧಾನಿ ರಫೀಕ್ ಮುಗುಳಿ ಇವರ ನೇತ್ರತ್ವದಲ್ಲಿ, ಮುಹಿಯುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿ ಇದರ ಮೇಲುಸ್ತುವಾರಿಯಲ್ಲಿ ನಡೆಯಲಿರುವ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಹಲವಾರು ಗಣ್ಯ ವ್ಯಕ್ತಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿದೇಶದಲ್ಲಿ ಉಧ್ಯಮಿಯಾಗಿರುವ ರಫೀಕ್‌ ಮುಗುಳಿ ಇವರು, ಅಲ್ ಅಮೀನ್ ದಮ್ಮಾಮ್ ಕಮಿಟಿಯ ಸದಸ್ಯರಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದೀಗ ನಾಲ್ಕು ಬಡ ಹೆಣ್ಣುಮಕ್ಕಳಿಗೆ ಉಚಿತ ಮದುವೆ ಮಾಡಿಸುವುದರ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!