dtvkannada

ಸುಳ್ಯ: ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಇದೀಗ ವರದಿಯಾಗಿದೆ.

ಮೃತಪಟ್ಟ ಬಾಲಕನ ಕುಟುಂಬಸ್ಥರು ಆಂಧ್ರ ಮೂಲದವರಾಗಿದ್ದು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರೆಂದು ತಿಳಿದು ಬಂದಿದೆ.

ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದರು ಆದರೆ ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕಾಣೆಯಾಗಿದ್ದು ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಅಲ್ಲೇ ಪಕ್ಕದಲ್ಲಿ ಮೃತದೇಹ ತೇಳುತ್ತಿರುವುದು ಕಂಡು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!