ಸುಳ್ಯ: ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಇದೀಗ ವರದಿಯಾಗಿದೆ.
![](http://dtvkannada.in/wp-content/uploads/2022/02/IMG-20220202-WA0052.jpg)
ಮೃತಪಟ್ಟ ಬಾಲಕನ ಕುಟುಂಬಸ್ಥರು ಆಂಧ್ರ ಮೂಲದವರಾಗಿದ್ದು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರೆಂದು ತಿಳಿದು ಬಂದಿದೆ.
![](http://dtvkannada.in/wp-content/uploads/2022/02/IMG-20220202-WA0053-1024x576.jpg)
ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದರು ಆದರೆ ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕಾಣೆಯಾಗಿದ್ದು ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಅಲ್ಲೇ ಪಕ್ಕದಲ್ಲಿ ಮೃತದೇಹ ತೇಳುತ್ತಿರುವುದು ಕಂಡು ಬಂದಿದೆ.
![](http://dtvkannada.in/wp-content/uploads/2022/02/IMG-20220202-WA0054-1024x728.jpg)