dtvkannada

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಸಂಪ್ಯದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಬೆಟ್ಟಂಪಾಡಿ ಹರಿನಾರಾಯಣ್ ಭಟ್ ಎಂಬವರ ಮಗಳು ಭಾಗ್ಯಲಕ್ಷ್ಮಿ ಮತ್ತು ಬೈಕ್ ಸವಾರನನ್ನು ಪ್ರಮೋದ್ ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಗೆ ಸಾಗುತ್ತಿದ್ದ ಲಾರಿ ಮತ್ತು ಬೆಟ್ಟಂಪಾಡಿ ಕಡೆ ಸಾಗುತ್ತಿದ್ದ ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೈಕ್’ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 100ಮೀ ದೂರದವರೆಗೆ ಎಳೆದುಕೊಂಡು ಬಂದಿದೆ.

ಘಟನೆಯಲ್ಲಿ ಸಹಸವಾರೆ ಭಾಗ್ಯಲಕ್ಷ್ಮಿ ರವರ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!