dtvkannada

'; } else { echo "Sorry! You are Blocked from seeing the Ads"; } ?>

ಮಂಡ್ಯ: ಒಂದೇ ಕುಟುಂಬದ ಐವರನ್ನು(ನಾಲ್ವರು ಮಕ್ಕಳು, ಒಬ್ಬಾಕೆ ಮಹಿಳೆ) ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮದಲ್ಲಿ ನಡೆದಿದೆ

ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಕೊಲೆಯಾದವರು. ಸ್ಥಳಕ್ಕೆ ಕೆಆರ್‌ಎಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಭೀಕರ ಕೃತ್ಯಕ್ಕೆ ಕೆಆರ್‌ಎಸ್ ಗ್ರಾಮ ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

'; } else { echo "Sorry! You are Blocked from seeing the Ads"; } ?>

ಲಕ್ಷ್ಮೀ ಪತಿ ಗಂಗಾರಾಮ್ 10 ದಿನದ ಹಿಂದೆ ವ್ಯಾಪಾರಕ್ಕೆ ಹೋಗಿದ್ದರು. ಗಂಗಾರಾಮ್ ಪ್ಲಾಸ್ಟಿಕ್ ಹೂವು ಸೇರಿ ಹಲವು ವಸ್ತುಗಳ ಮಾರಾಟ ಮಾಡುತ್ತಿದ್ದರು. ಒಮ್ಮೆ ವ್ಯಾಪಾರಕ್ಕೆ ಹೋದರೆ 15 ದಿನ, 1 ತಿಂಗಳು ಬಿಟ್ಟು ಬರುತ್ತಿದ್ದರು. ಗಂಗಾರಾಮ್ ಅಣ್ಣ ಗಣೇಶ್ ಪತ್ನಿ ಚಂಪಾಡಿ ಸಹಾ ವ್ಯಾಪಾರಕ್ಕೆ ತೆರಳಿದ್ದರು. ಇವರೆಲ್ಲಾ ಒಟ್ಟಿಗೆ ವಾಸವಾಗಿದ್ದರು.

ಘಟನಾ ಸ್ಥಳಕ್ಕೆ ಮಂಡ್ಯ ಎಸ್ಪಿಎನ್ ಯತೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ಸಂದೇಶ್ ಕುಮಾರ್ ಸೇರಿ ಹಲವು ಹಿರಿಯ ಅಧಿಕಾರಿಗಳು ಇದ್ದರು. ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!