dtvkannada

ಮಂಗಳೂರು: ರಾಜ್ಯದಲ್ಲೆಡೆ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸುರಯ್ಯ ಅಂಜುಮ್‌ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ಫೇಸ್ಬುಕ್ ಲೈವ್ ಮೂಲಕ, ಹಿಜಾಬ್ ವಿರೋಧಿ ಹೇಳಿಕೆ‌ ನೀಡಿರುವ ಅವರು, ಶಿಕ್ಷಣ ಸಂಸ್ಥೆಯಲ್ಲಿ ಸಮಾನತೆ ಪಾಲಿಸುವ ಮೂಲಕ ವಿದ್ಯಾರ್ಥಿಗಳು ಸಮವಸ್ತ್ರ ಪಾಲನೆ ಮಾಡಬೇಕು. ಕಾಲೇಜು ಬರುವವರು ಹಿಜಾಬ್ ಧರಿಸುವ ಅವಶ್ಯಕತೆ ಇಲ್ಲ, ಹಾಗೊಂದು ವೇಳೆ ಹಿಜಾಬೇ ನಿಮಗೆ ಮುಖ್ಯವಾದರೆ ನೀವು ಬೇರೆ ಕಾಲೇಜಿಗೆ‌ ಸೇರಿಕೊಳ್ಳಿ ಎಂದು ಸಂವಿಧಾನಿಕ ಹಕ್ಕಿನ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇವರ ಹೇಳಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಇರಿಸುಮುರಿಸು ಉಂಟಾಗಿದ್ದು, ಇವರನ್ನು ಪಕ್ಷದಿಂದ ಉಚ್ವಾಟನೆ ಮಾಡಲು ಕಾರ್ಯಕರ್ತರು ಜಾಲತಾಣದಲ್ಲಿ ಆಗ್ರಹಿಸಿದ್ದಾರೆ‌. ಇವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದಲ್ಲಿ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜಿನಾಮೆ ನೀಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಒಂದು ಕಡೆ ಸಿದ್ದರಾಮಯ್ಯ, ರಾಹುಲ್‌ ಗಾಂದಿ ಸೇರಿದಂತೆ ಪಕ್ಷದ ಅನೇಕ ನಾಯಕರು ಹಿಜಾಬ್ ಸಂವಿಧಾನಿಕ ಹಕ್ಕು ಎಂದು ಪರವಹಿಸಿ ಮಾತಾಡುತ್ತಿರುವಾಗ, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾದ ಸುರಯ್ಯ ಅಂಜುಮ್ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!