ಮಡಿಕೇರಿ: ಕಾಲೇಜು ಒಳಗೆ ಕೇಸರಿ ಶಾಲು ಹಾಕುವ ವಿಚಾರದಲ್ಲಿ ಒಂದೇ ಗುಂಪಿನ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ವಿದ್ಯಾರ್ಥಿ ಮೇಲೆ ಚಾಕು ದಾಳಿ ನಡೆದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸುಂದರನಗರ ಕಾಲೇಜಿನ ಆವರಣದಲ್ಲಿ ಸಂಭವಿಸಿದೆಯೆಂದು ವರದಿಯಾಗಿದೆ.
![](http://dtvkannada.in/wp-content/uploads/2022/02/IMG-20220208-WA0093.jpg)
ಸುಂದರನಗರ ಕಾಲೇಜು ಸೀನಿಯರ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕುವಂತೆ ಅಂತಿಮ ವರ್ಷದ ವಿದ್ಯಾರ್ಥಿಗಳು ಒತ್ತಾಯ ಮಾಡಿದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ್ ಎಂಬಾತನ ಹೆಗಲು ಹಾಗೂ ಬೆನ್ನಿಗೆ ಚಾಕುವಿನಿಂದ ಇರಿತದಿಂದ ಗಾಯವಾಗಿದ್ದು, ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
![](http://dtvkannada.in/wp-content/uploads/2022/02/IMG-20220208-WA0092.jpg)
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ವಿಕ್ಕು ಹಾಗೂ ಧನು ಎಂಬವರನ್ನು ಕುಶಾಲನಗರ ಪಟ್ಟಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.