dtvkannada

ವಿಟ್ಲ: ಹಾಡಹಗಲೇ ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.

ದುಷ್ಕರ್ಮಿಗಳಿಂದ ದಾಳಿಗೊಳಗಾದ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈಕೆಯ ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ.

ಈ ಸಂದರ್ಭ ಇಬ್ಬರು ವ್ಯಕ್ತಿಗಳು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಮನೆಯ ಒಳಗೆ ಬಂದು, ಕತ್ತಿಯಿಂದ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!