ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆನ್ನಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅನ್ಯಕೋಮಿನ ಯುವಕ ಮತ್ತು ಯುವತಿ ಕೇರಳದ ಬಂದಡ್ಕ ಕಡೆಯಿಂದ ಕಾರಿನಲ್ಲಿ ಕೋಲ್ಚಾರು ಮಾರ್ಗವಾಗಿ ಬರುತ್ತಿದ್ದ ಸಂದರ್ಭ ಫೆಬ್ರವರಿ 8ರಂದು ಸುಳ್ಯ ಸಮೀಪ ನಾಗಪಟ್ಟಣ ಎಂಬಲ್ಲಿ ಕಾರು ಪಲ್ಟಿಯಾಗಿ ಬಿದ್ದಿದೆ.
ಘಟನೆಯಲ್ಲಿ ಇಬ್ಬರು ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವೇಳೆ ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು.
ಅವರು ಕಾರನ್ನು ಬಹಳ ದೂರದಿಂದಲೇ ಹಿಂಬಾಲಿಸಿಕೊಂಡು ಬಂದಿದ್ದರು. ಅಪಘಾತವಾದ ಸಂದರ್ಭದಲ್ಲೇ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಈ ಜೋಡಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.