dtvkannada

ಸುಳ್ಯ: ದಿನಗಳ ಹಿಂದೆ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ.

ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿಯೆಂದು ತಿಳಿದು ಬಂದಿದೆ.

ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ‌ ವಾರದ ಹಿಂದೆ ಮರ್ಕಂಜದ ತನ್ನ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿಪಾಷಣ ಸೇವಿಸಿದ್ದಳೆಂದು ಹೇಳಲಾಗುತ್ತಿದೆ.

ಮನೆಯವರಿಗೆ ವಿಷಯ ತಿಳಿದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು.
ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ನಿನ್ನೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇಲಿ ಪಾಷಾಣ ಸೇವಿಸಿರುವುದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

By dtv

Leave a Reply

Your email address will not be published. Required fields are marked *

error: Content is protected !!