dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಹಿಜಾಬ್ ವಿವಾದ ವಿಕೋಪಕ್ಕೆ ಏರಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಆದರೆ ಅಲ್ಲಲ್ಲಿ ಈ ಸಂಘರ್ಷ ತಲೆದೋರುತ್ತಲೇ ಇದೆ.

ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ.

'; } else { echo "Sorry! You are Blocked from seeing the Ads"; } ?>

ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು. ಇಂದು ಪ್ರಾಂಶುಪಾಲರ ಅನುಮತಿ ಮೇರೆಗೆ ವಿದ್ಯಾರ್ಥಿನಿಯರು ಪಿನ್ ಹಾಕದೇ ಕೇವಲ ಶಾಲು ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು.

ಆದರೆ, ಕೆಲ ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಪರೀಕ್ಷಾ ತರಗತಿಯಿಂದ ಹೊರಹೋಗಲು ತಿಳಿಸಿದ್ದಾರೆ.
ಪರಿಣಾಮ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ವಾಗ್ವಾದ ಉಂಟಾಗಿದೆ. ಕಾಲೇಜು ಗೇಟು ಮುಂಭಾಗದಲ್ಲೇ ಪರಸ್ಪರ ಜಗಳಕ್ಕಿಳಿದಿದ್ದಾರೆ.

'; } else { echo "Sorry! You are Blocked from seeing the Ads"; } ?>

ಜಗಳದ ಮಧ್ಯೆ ಓರ್ವ ವಿದ್ಯಾರ್ಥಿ ನೀವು ಹಿಜಾಬ್ ಧರಿಸುವುದಾದರೆ ಕಾಲೇಜು ಪ್ರವೇಶಿಸಬಾರದು ಎಂಬ ಮಾತನ್ನು ಹೇಳಿದಾಗ ಒರ್ವ ಮುಸ್ಲಿಂ ವಿದ್ಯಾರ್ಥಿನಿಯು ಕಾಲೇಜು ಏನು ನಿನ್ನ ಅಪ್ಪನದ್ದಾ..! ಎಂದು ಕೇಳಿದ್ದಾರೆ. ಈ ತರ ಹೇಳುವ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಮಧ್ಯ ಪೊಲೀಸರು ಪ್ರವೇಶಿಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಪ್ರಾಂಶುಪಾಲರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು, ಪರಿಸ್ಥಿತಿ ತಿಳಿಯಾಗಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!