ಕುಂಬ್ರ: ಗುಡ್ಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಗಿಡ ಮರಗಳು ಸುಟ್ಟು ಕರಕಲಾದ ಘಟನೆ ಇಲ್ಲಿನ ಗಟ್ಟಮನೆ ಮಸೀದಿ ಸಮೀಪದಲ್ಲಿ ನಡೆದಿದೆ.
ಶಾರ್ಟ್ ಸರ್ಕೂಟ್’ನಿಂದ ಈ ಅವಘಡ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪ್ಟಟಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕಗದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಗಟ್ಟಮನೆ ಮಸೀದಿಗೆ ಸೇರಿದ ಗೇರುತೋಟ ಇದಾಗಿದ್ದು, ಸಾವಿರಾರು ಮೌಲ್ಯದ ಗೇರು ಫಸಲು ನಾಶವಾಗಿದೆ ಎಂದು ತಿಳಿದು ಬಂದಿದೆ.