dtvkannada

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ.

ಮೊಗ್ರಾಲ್ ಪುತ್ತೂರಿನ ತನ್ಸಿಹ್( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ.

ಉಪ್ಪಳದಿಂದ ಬೈಕ್ ನಲ್ಲಿ ಮನೆಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ತನ್ಸಿಹಾನನ್ನು ಕುಂಬಳೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!