ಬೆಂಗಳೂರು: ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
![](http://dtvkannada.in/wp-content/uploads/2022/03/IMG-20220315-WA0013-1024x576.jpg)
ಹಿಜಾಬ್ ನಿಷೇಧ ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರ ನೇತೃತ್ವದ ಪೀಠವು ಈ ತೀರ್ಪು ನೀಡಿದೆ.
ಫೆಬ್ರವರಿ 10ರಿಂದ ಫೆಬ್ರವರಿ 25ರ ನಡುವೆ 11 ದಿನ ಕಾಲ ಪ್ರತಿದಿನ ಸರಾಸರಿ ಎರಡು ತಾಸಿನಂತೆ ಒಟ್ಟಾರೆ 23.5 ತಾಸು ವಿಚಾರಣೆ ನಡೆಸಿತ್ತು.
![](http://dtvkannada.in/wp-content/uploads/2022/03/f70891a6-e711-4222-b18b-ee2d8afe6859-682x1024.jpg)