ಉಪ್ಪಿನಂಗಡಿ: ಹಿಜಾಬ್ ತೀರ್ಪು ವಿರೋಧಿಸಿ ನಾಳೆ ರಾಜ್ಯಾಧ್ಯಾಂತ ಅಮಿರೇ ಶರೀಅತ್ ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ಉಪ್ಪಿನಂಗಡಿ ನಾಗರೀಕ ಹಿತರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ಸೂಚಿಸಿದ್ದು.
ನಾಳೆ ಗುರುವಾರ ಉಪ್ಪಿನಂಗಡಿ ಪೇಟೆ ಸಂಪೂರ್ಣ ಬಂದ್ ಮಾಡುವಂತೆ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುಸ್ತಫಾ ಕೆಂಪಿ ಉಪ್ಪಿನಂಗಡಿ ವರ್ತಕರು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಹೈಕೋರ್ಟ್ ಹಿಜಾಬ್ ಬಗ್ಗೆ ನೀಡಿರುವ ತೀರ್ಪು ಅಸಂವಿಧಾನಿಕವಾಗಿದ್ದು ತೀರ್ಪನ್ನು ಮರು ಪರಿಶೀಲಿಸಬೇಕು ಎಂದು ಅವರು ಹೇಳಿದರು.
ನಾಳೆ ನಡೆಯುವ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಉಪ್ಪಿನಂಗಡಿ ವ್ಯಾಪ್ತಿಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.