ಈಶ್ವರಮಂಗಳ: ಹಿಜಾಬ್ ತೀರ್ಪು ವಿರೋಧಿಸಿ ನಾಳೆ ರಾಜ್ಯಾಧ್ಯಾಂತ ಅಮಿರೇ ಶರೀಅತ್ ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ಈಶ್ವರಮಂಗಳ ಮುಸ್ಲಿಂ ವರ್ತಕರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
ನಾಳೆ ಗುರುವಾರ ಈಶ್ವರಮಂಗಳ ಪೇಟೆ ಸ್ವಯಂಪ್ರೇರಿತವಾಗಿ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಎಲ್ಲಾ ವರ್ತಕರು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿಲಾಗಿದೆ.
ನಾಳೆ ನಡೆಯುವ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಈಶ್ವರಮಂಗಳ ವ್ಯಾಪ್ತಿಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಸಹಕರಿಸಬೇಕೆಂದು ಮುಸ್ಲಿಂ ವರ್ತಕರು ಮನವಿ ಮಾಡಿದರು.