ಕಡಬ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ಮುಸ್ಲಿಂ ಸಂಘಟನೆಗಳು ನೀಡಿದ ಬಂದ್ ಕರೆಗೆ ಸವಣೂರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಕಡಬ ತಾಲೂಕಿನ ಸವಣೂರು ಪೇಟೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್’ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
ಬಂದ್’ ಕರೆಗೆ ಬೆಂಬಲ ಸೂಚಿಸುವಂತೆ ಮುಸ್ಲಿಂ ಸಂಘಟನೆಗಳು ನಿನ್ನೆ ವಿನಂತಿ ಮಾಡಿತ್ತು. ಅದರಂತೆಯೆ ತಾಲೂಕಿನ ಎಲ್ಲಾ ಮುಸ್ಲಿಂ ವರ್ತಕರು,, ಸಾರ್ವಜನಿಕರು, ಆಟೋ ಚಾಲಕರು ಸಂಚಾರ ನಿಲ್ಲಿಸಿ ಬಂದ್’ಗೆ ಬೆಂಬಲ ಸೂಚಿಸಿದ್ದಾರೆ.