dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ತನ್ನ ಪ್ರಿಯಕರನಲ್ಲಿ ಮದುವೆಯಾಗುವಂತೆ ಕೇಳಿದ ಯುವತಿಗೆ ಪ್ರಿಯತಮನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಗರದಲ್ಲಿ ನಡೆದಿದೆ.

ಈ ಘಟನೆಯು ಎರಡು ದಿನಗಳ ಹಿಂದೆ ತಡವಾಗಿ ಬೆಳಕಿಗೆ ಬಂದಿದ್ದು, ದಾನೇಶ್ವರಿ ಎಂಬ ಯುವತಿಯ ಮೇಲೆ ಶಿವಕುಮಾರ್ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

'; } else { echo "Sorry! You are Blocked from seeing the Ads"; } ?>

ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯ ವಿಚಾರದಲ್ಲಿ ಪ್ರಸ್ತಾಪ ನಡೆದಿತ್ತು. ಈ ಸಂದರ್ಭ ಇಬ್ಬರ ನಡುವೆ ಗಲಾಟೆಯಾಗಿತ್ತು. ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದಿದ್ದಳು. ಈ ವೇಳೆ ಮದುವೆ ವಿಚಾರದಲ್ಲಿ ಇದ್ದ ಜಗಳ ಅತಿರೇಕಕ್ಕೇರಿತ್ತು.

ಈ ವೇಳೆ ಕೋಪಗೊಂಡ ಶಿವಕುಮಾರ್ ಬಾಟಲ್‌ನಲ್ಲಿ ಪೆಟ್ರೋಲ್ ತಂದು ದಾನೇಶ್ವರಿ ಮೇಲೆ ಎರಚಿ ಬೆಂಕಿ ಹಚ್ಚಿದ್ದಾನೆ.ಗಾಯಾಳು ಯುವತಿಯನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

'; } else { echo "Sorry! You are Blocked from seeing the Ads"; } ?>

ಆದರೆ ಚಿಕಿತ್ಸೆ ಫಲಕಾರಿಯಾಗದೆ ದಾನೇಶ್ವರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಶಿವಕುಮಾರ್‌ ವಿರುದ್ಧ IPC 302 ಮತ್ತು SC -ST ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!