ಉಡುಪಿ: ತೆಂಗಿನ ಮರದಿಂದ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಮಲ್ಪೆಯ ಈಶ್ವರನಗರದಲ್ಲಿ ನಡೆದಿದೆ.
![](http://dtvkannada.in/wp-content/uploads/2022/03/IMG-20220319-WA0045.jpg)
ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದ ರವಿ (46) ಎಂಬವರು ನಿನ್ನೆ ಈಶ್ವರನಗರದ ನಿವಾಸಿ ಜೈಕರ್ ಎಂಬವರ ಮನೆಯ ತೆಂಗಿನ ಮರದಿಂದ ತೆಂಗಿನಕಾಯಿ ಕೊಯ್ದು ಇಳಿಯುತ್ತಿರುವಾಗ ಅಕಸ್ಮಿಕವಾಗಿ ಆಯ ತಪ್ಪಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದೆ.
ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮೃತ ಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.