dtvkannada

ಹಾಸನ: ಸರ್ಕಾರಿ ಬಸ್ ಹಾಗೂ ಕಾರು‌ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ.

ಅಕ್ಮಲ್(18) ಜಿಲಾನಿ(19) ತೌಹೀದ್(18) ಕೈಫ್ (18) ಎಂಬವರು ಮೃತ ದುರ್ದೈವಿಗಳು. ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ಮೃತಪಟ್ಟವರನ್ನು ವಿದ್ಯಾವಿಕಾಸ್‌ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಐದು ಮಂದಿ ಬೇಲೂರಿನಿಂದ ಹಾಸನಕ್ಕೆ ಪ್ರಯಾಣಿಸುತ್ತಿದ್ದು, ನಿಯಂತ್ರಣ ತಪ್ಪಿ ಇಂದು ಮಧ್ಯಾಹ್ನ ಸಂಕೇನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸ ಪಡುತ್ತಿದ್ದಾರೆ ಎಂಬುವುದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!