dtvkannada

ಪುತ್ತೂರು: ಕಳೆದ ಸೋಮವಾರ ಮುಂಜಾನೆ ಬೆಂಗಳೂರು – ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಕೂರ್ನಡ್ಕದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾನೆ.

ಮೃತ ಯುವಕನನ್ನು ಆಶಿಕ್ ಸುನೈಫ್(21) ಎಂದು ತಿಳಿದು ಬಂದಿದೆ. ಈತ ಪುತ್ತೂರಿನ ಬಸ್ ನಿಲ್ದಾನದ ಬಳಿ ಇರುವ ಬ್ಯಾಗ್ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಮೊನ್ನೆ ರಾತ್ರಿ ಕೆಲಸ ಮುಗಿಸಿ ತನ್ನ ಸ್ನೇಹಿತ ಕೂರ್ನಡ್ಕದ ರವೂಫ್ ಜೊತೆ ಆಕ್ಟೀವಾದಲ್ಲಿ ಬೆಂಗಳೂರು ಕಡೆ ಹೊರಟಿದ್ದ. ಮೈಸೂರು ರಸ್ತೆಯ ರಾಮನಗರ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿದ ಆಕ್ಟೀವಾ ಡಿವೈಡರ್’ಗೆ ಡಿಕ್ಕಿಯಾಗಿತ್ತು.

ಡಿಕ್ಕಿಯ ರಭಸಕ್ಕೆ ಸವಾರ ಸುನೈಫ್ ರಸ್ತೆಗೆಸಯಲ್ಪಟ್ಟು, ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಕೂಡಲೇ ಸ್ಥಳೀಯ ಪೊಲೀಸರ ಸಹಾಯದಿಂದ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಅಪಘಾತದಲ್ಲಿ ಹಿಂಬದಿ ಸವಾರ ರವೂಫ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೃತ ಯುವಕ ತಂದೆ, ತಾಯಿ, ಸಹೋದರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!