dtvkannada

ಪುತ್ತೂರು: ಕೆಲ ದಿನಗಳ ಹಿಂದೆ ಪುತ್ತೂರಿನ ಬಾಡು ಉಜ್ರುಪ್ಪಾದ ಶಿವಪ್ರಸಾದ್ ಭಟ್ ಇವರ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕುಖ್ಯಾತ ಕಳ್ಳರ ಗ್ಯಾಂಗ್ ವೊಂದನ್ನು ಇದೀಗ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪುತ್ತೂರು ತಾರಿಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್ (42) ಹಾಗೂ ಸಾಲ್ಮರ ನಿವಾಸಿ ಕೆ ಮಹಮ್ಮದ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 6.5 ಲಕ್ಷ ಬೆಲೆಬಾಳುವ ಚಿನ್ವಾಭರಣ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಆರೋಪಿಗಳು ಈ ಹಿಂದೆ ಕೇರಳ ಮತ್ತು ಕರ್ನಾಟಕ ರಾಜ್ಯದಲ್ಲಿ ಹಲವು ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು ಇವರುಗಳ ಮೇಲೆ ಈ ಹಿಂದೆ ಉಪ್ಪಿನಂಗಡಿ ಪೊಲೀಸ್‌ ಠಾಣೆ, ಸುಳ್ಯ ಪೊಲೀಸ್‌ ಠಾಣೆ, ಪುತ್ತೂರು ನಗರ ರಾಣೆ, ಬೆಳ್ಳಾರೆ ಪೊಲೀಸ್ ಠಾಣೆ, ಬಂಟ್ವಾಳ ಪೊಲೀಸ್ ಠಾಣೆ, ಧರ್ಮಸ್ಥಳ ಪೊಲೀಸ್ ಠಾಣೆ, ವಿಟ್ಲ ಪೊಲೀಸ್ ಠಾಣೆ, ಕೇರಳ ರಾಜ್ಯದ ಮಲಪ್ಪುರಂ ಕೊಂಡೆಟ್ಟಿ ಪೊಲೀಸ್ ಠಾಣೆ, ಆದೂರೂ ಪೊಲೀಸ್ ಠಾಣೆ, ಕೊಡಗಿನ ಸೋಮಾವಾರ ಪೇಟೆ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇವರುಗಳ ಮೇಲೆ ವಾರಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದು ನಿನ್ನೆಯ ದಿನ ವಿಶೇಷ ತಂಡವು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.

ಆರೋಪಿಗಳು ವಿಟ್ಲ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಅಜ್ಜಿನಡ್ಕ ಮಹಮ್ಮದ್ ಅಲಿ ಎಂಬವರ ಮನೆ ಕಳ್ಳತನ, ಬಲ್ನಾಡು ಗ್ರಾಮದ ವಿಷ್ಣು ಮೂರ್ತಿ ದೈವಸ್ಥಾನ ಕಳ್ಳತನ ಪ್ರಕರಣ, ಇರ್ದ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ, ಕಾವು ಸಿರಿ ಭೂಮಿ ಕೃಷಿ ಉತ್ಪನ್ನ ಅಂಗಡಿ ಕಳ್ಳತನ, ಉತ್ತರ ಕನ್ನಡ ಜಿಲ್ಲೆ ಭಟ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಹಾಗೂ ಕೇರಳ ರಾಜ್ಯದ ಕಾಸರಗೋಡು ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಚೆರ್ಕಳದಲ್ಲಿ ಎರಡು ಮನೆ ಕಳ್ಳತನ ಪ್ರಕರಣಗಳ ಬಗ್ಗೆ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದು, ಆರೋಪಿತರಿಂದ ಸುಮಾರು 5 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು, ಲ್ಯಾಪ್ ಟಾಪ್, ಸಿಸಿ ಕ್ಯಾಮರ ಡಿವಿಆರ್ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಮೋಟಾರು ಸೈಕಲನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರು ಋಷೀಕೇಶ್ ಸೋನಾವಣೆ ಮತ್ತು ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕುಮಾರ ಚಂದ್ರ ರವರ ಮಾರ್ಗದರ್ಶನದಲ್ಲಿ, ಮಾನ್ಯ ಪೊಲೀಸ್ ಉಪಾಧೀಕ್ಷಕರು ಡಾ . ಗಾನ ಪಿ ಕುಮಾರ್ ಪುತ್ತೂರು ರವರ ನೇತೃತ್ವದಲ್ಲಿ, ಶ್ರೀ ಉಮೇಶ್ ಯು ಪೊಲೀಸ್ ವೃತ್ತ ನಿರೀಕ್ಷಕರು ಪುತ್ತೂರು ಗ್ರಾಮಾಂತರ ವೃತ್ತ, ಶ್ರೀ ಉದಯರವಿ ಎಂ ವೈ, ಶ್ರೀ ಅಮೀನ್ ಸಾಬ್ ಅತ್ತಾರ್‌ ಪಿಎಸ್‌ಐ ಪುತ್ತೂರು ಗ್ರಾಮಾಂತರ ಠಾಣೆ ರವರ ವಿಶೇಷ ತಂಡದ ಸಿಬಂದಿಗಳಾದ ಎಎಸ್‌ಐ ಮುರುಗೇಶ್, ಶಿವರಾಮ ಗೌಡ, ಧರ್ಣಪ್ಪ ಗೌಡ ವರ್ಗಿಸ್, ಕೃಷ್ಣಪ್ಪ ಗೌಡ, ದೇವರಾಜ್, ಧರ್ಮಪಾಲ್, ಅದ್ರಾಮ್, ಪ್ರವೀಣ್ ರೈ ಪಾಲ್ತಾಡಿ, ಜಗದೀಶ್ ಅತ್ತಾಜೆ, ಹರ್ಷೀತ್ ಗಿರೀಶ್, ಗುಡದಪ್ಪ ತೋಟದ್, ವಿನೋದ್ ಹಾಗೂ ಮಪಿಸಿ ಗಾಯತ್ರಿ ಮತ್ತು ಜಿಲ್ಲಾ ಗಣಕ ಯಂತ್ರ ವಿಭಾಗದ ಸಂಪತ್ ಮತ್ತು ದಿವಾಕರ ರವರು ಭಾಗವಹಿಸಿದ್ದರು. ಪ್ರಕರಣ ನಡೆದ ಒಂದೇ ತಿಂಗಳಿನಲ್ಲಿ ಪ್ರಕಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಬಹುಮಾನವನ್ನು ಘೋಷಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!