ಬೆಳ್ತಂಗಡಿ: ದಲಿತ ಯುವಕನಾದ ದಿನೇಶ್ ಕನ್ಯಾಡಿ ಕೊಲೆ ಪ್ರಕರಣದ ಮುಖ್ಯ ಆರೋಪಿ ಬಜರಂಗದಳ ಮುಖಂಡ ಡಿ.ಕೃಷ್ಣ ಎಂಬಾತನಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆಯೆಂದು ವರದಿಯಾಗಿದೆ.
![](http://dtvkannada.in/wp-content/uploads/2022/03/1648269561195.jpeg)
ಕಳೆದ ತಿಂಗಳ ಫೆ.23ರಂದು, ದಿನೇಶ್ ಮೇಲೆ ಜಾಗದ ನೋಂದಣಿ ವಿಚಾರವನ್ನು ಸಾರ್ವಜನಿಕವಾಗಿ ಹೇಳಿದ್ದಾರೆ ಎನ್ನುವ ನೆಪವೊಡ್ಡಿ ಆರೋಪಿ ಕೃಷ್ಣ ಹಲ್ಲೆ ನಡೆಸಿದ್ದರು.
ಈ ಸಂಬಂಧ ಹಲ್ಲೆಯ ಸಿಸಿಟಿವಿ ದೃಶ್ಯಾವಳಿಗಳೂ ವೈರಲ್ ಆಗಿದ್ದವು. ಆದರೆ ಗಂಭೀರ ಗಾಯಗೊಂಡಿದ್ದ ದಿನೇಶ್ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ.24ರಂದು ದಿನೇಶ್ ಮೃತಪಟ್ಟಿದ್ದರು.
ಇದಾದ ಕೆಲವೇ ದಿನಗಳಲ್ಲಿ ಪೊಲೀಸರು ಬಜರಂಗದಳ ಮುಖಂಡ ಕೃಷ್ಣನನ್ನು ಬಂಧಿಸಿದ್ದರು. ಇದೀಗ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.