ಬಂಟ್ವಾಳ: ದ್ವಿಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಿನ್ನೆ ಬಂಟ್ವಾಳದ ಗೂಡಿನಬಳಿಯಲ್ಲಿ ನಡೆದಿದೆ.
![](http://dtvkannada.in/wp-content/uploads/2022/03/IMG-20220328-WA0013.jpg)
ಆರೋಪಿಯಾದ ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.
ಆರೋಪಿ ಮಹಮ್ಮದ್ ಮುಸ್ತಫಾ ಹಾಗೂ ಸ್ನೇಹಿತ ಇಬ್ಬರು ಸೇರಿ ದನಗಳನ್ನು ತಂದು ಪ್ರತಿ ಆದಿತ್ಯವಾರ ದಿನ ಮನೆಯಲ್ಲಿ ಕಡಿದು ಮಾಂಸ ಮಾಡಿ ಬಳಿಕ ದ್ವಿಚಕ್ರದ ಮೂಲಕ ನಂದಾವರ, ಗೂಡಿನಬಳಿ, ಮಂಚಿ ಸಹಿತ ತಾಲೂಕಿನ ಆಯ್ದ ಕಡೆಗಳಿಗೆ ಮಾರಾಟ ಮಾಡುವುದಾಗಿ ಪೋಲೀಸರಿಗೆ ಮಾಹಿತಿ ಲಭಿಸಿದೆ.
ಆರೋಪಿಯ ದ್ವಿಚಕ್ರವಾಹನ ಹಾಗೂ ಅದರಲ್ಲಿದ್ದ 20 ಕೆ.ಜಿ.ಮಾಂಸವನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.