ಪುತ್ತೂರು: ಶಿಕ್ಷಕಿಯೋರ್ವಳು ವಿದ್ಯಾರ್ಥಿಗೆ ಮನಬಂದಂತೆ ಹೊಡೆದು ಗಾಯಗೊಳಿಸಿದ ಆರೋಪ ಪುತ್ತೂರು ಸಮೀಪದ ಮುಖ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಕೇಳಿ ಬಂದಿದೆ. ಇದೀಗ ಶಿಕ್ಷಕಿ ವೇದಾವತಿ ವಿರುದ್ಧ ವಿದ್ಯಾರ್ಥಿಯ ತಂದೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶಾಲೆಯಲ್ಲಿ ಯಾವುದೋ ಒಂದು ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಮನಬಂದಂತೆ ಹಲ್ಲೆಗೈಯ್ಯಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಇದೀಗ ಶಿಕ್ಷಕಿ ವಿರುದ್ಧ ವಿದ್ಯಾರ್ಥಿಯ ತಂದೆ ಪ್ರಕರಣ ದಾಖಲಿಸಿದ್ದಾರೆ.