ಉಡುಪಿ : ಪಿಯುಸಿ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ಸಂಭವಿಸಿದೆ.
![](http://dtvkannada.in/wp-content/uploads/2022/03/1648744656006.jpg)
ಮೃತಪಟ್ಟವರು ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ವಿದ್ಯಾರ್ಥಿಗಳಾಗಿದ್ದಾರೆ.
ಶಂಕರನಾರಾಯಣ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ನಿನ್ನೆ ಮಧ್ಯಾಹ್ನದ ವೇಳೆಗೆ ಸ್ನಾನಕ್ಕೆಂದು ನೀರಿಗಿಳಿದಾಗ ಸೆಳೆತಕ್ಕೆ ಒಳಗಾಗಿ ಕೊಚ್ಚಿಕೊಂಡು ಹೋಗಿದ್ದಾರೆನ್ನಲಾಗಿದೆ.
![](http://dtvkannada.in/wp-content/uploads/2022/03/1648744652617.jpg)
ಘಟನೆ ನಡೆದ ಸ್ಥಳಕ್ಕೆ ಅಮಾಸೆಬೈಲು ಪೊಲೀಸರು ಭೇಟಿ ನೀಡಿದ್ದಾರೆ.