dtvkannada

ಮಂಗಳೂರು: ನಗರದ ಬೊಕ್ಕಪಟ್ಣ ಬಳಿಯ ಮಠದಕಣಿ ಬಳಿ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಇಮ್ರಾನ್‌ ಮಠದ ಕಣಿ ಎಂಬವರಿಗೆ ಸೇರಿದ ಗುಜರಿ ಅಂಗಡಿಗೆ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಈ ವೇಳೆ ಅಂಗಡಿಯಲ್ಲಿ ಯಾರು ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಕಿಯ ಕೆನ್ನಾಲಗೆ ಪರಿಸುತ್ತಿದ್ದಂತೆ ಸ್ಥಳೀಯರು ನೀರು ಸಿಂಪಡಿಸಿ ಬೆಂಕಿ ನಂದಿಸಲು ಯತ್ನಿಸಿದ್ದರು.

ಜೊತೆಗೆ ಅಗ್ನಿಶಾಮಕ ದಳದ ಅಧಿಕಾರಿ ರಾಜ ಅವರ ತಂಡವೂ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದೆ.

ಸ್ಥಳಕ್ಕೆ ಕಾರ್ಪೋರೇಟರ್‌ ಜಗದೀಶ್‌ ಶೆಟ್ಟಿ ಭೇಟಿ ನೀಡಿದ್ದಾರೆ. ಸದ್ಯ ಬೆಂಕಿ ಸಂಪೂರ್ಣ ನಂದಿಸಲಾಗಿದೆ. ಅಪಾರ ನಷ್ಟ ಸಂಭವಿಸಿದೆ.

By dtv

Leave a Reply

Your email address will not be published. Required fields are marked *

error: Content is protected !!