ಕಡಬ: ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದೆ.
ಮೃತಪಟ್ಟ ಬಾಲಕನನ್ನು ನರಿಮೊಗರು ಐಟಿಐನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್(18) ಎಂದು ಗುರುತಿಸಲಾಗಿದೆ.
ಈತ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕಾಗಿ ನದಿ ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಯೆಂದು ವರದಿಯಾಗಿದೆ.