dtvkannada

ಬೆಳ್ತಂಗಡಿ: ನೀರಿನ ಸಂಪ್‌ನ ಸ್ವಚ್ಛತೆಗೆ ಇಳಿದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ.

ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ.
ಶ್ರೀಧರ ಗೌಡ ಕೂಲಿ ಕೂಲಿ ಕಾರ್ಮಿಕರಾಗಿದ್ದು, ನಿನ್ನೆ ಸಂಜೆ 3 ಗಂಟೆಗೆ ನೆರೆಯ ಚಂದಪ್ಪ ಗೌಡ ಎಂಬವರ ಮನೆಯ ಬಳಿಯ ನೀರಿನ ಸಂಪ್‌ ಸ್ವಚ್ಛ ಮಾಡಲು ಹೋಗಿದ್ದರು.

ಸಂಜೆಯಾದರು ಶ್ರೀಧರ ಗೌಡ ಮರಳಿ ಬಾರದ ಕಾರಣ ನೀರಿನ ಸಂಪ್‌ ಬಳಿ ಸಂಜೆ ಹೋಗಿ ನೋಡಿದಾಗ ಶ್ರೀಧರ ಗೌಡರು ಟ್ಯಾಂಕ್ ನೀರಿನಲ್ಲಿ ಅರ್ಧ ಮುಳುಗಿದ್ದು ಕಂಡು ಬಂದಿತೆನ್ನಲಾಗಿದೆ.

ಕೂಡಲೇ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರೆನ್ನಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!