ಮಂಗಳೂರು: ಆರ್ಎಸ್’ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರಾಗಿದ್ದು ಮಂಗಳೂರು ಏ.ಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ರಕ್ತದೊತ್ತಡ ಕಡಿಮೆಯಾಗಿ( ಲೋ ಬಿಪಿ) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಎ.5 ರಂದು ಕಲ್ಲಡ್ಕ ಶ್ರೀ ರಾಮ ಶಾಲೆಯಲ್ಲಿ ಇರುವಾಗ ಹಠಾತ್ತಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಮಂಗಳೂರಿನ ಏ.ಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ನಡೆದಿದೆ ಎಂದು ಅವರ ಮೂಲಗಳಿಂದ ತಿಳಿದು ಬಂದಿದೆ.
ಇದೀಗ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. RSS ಸಂಘಟನೆಯ ಹಿರಿಯ ಮುಖಂಡರಾಗಿರುವ ಇವರು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.