dtvkannada

ಮಂಗಳೂರು: ಕಡಿಮೆ ರಕ್ತದೊತ್ತಡ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಆದರೆ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಅವರನ್ನು ಬೆಂಗಳೂರಿಗೆ ಕರೆತರುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಈಗಾಗಲೇ ಸೂಚಿಸಿದ್ದಾರೆ ಎಂಬ ಮಾಹಿತಿ ಇದ್ದು, ಆದರೆ ಪ್ರಭಾಕರ್‌ ಭಟ್‌ ಮಂಗಳೂರಿನಲ್ಲೇ ಶಸ್ತ್ರಚಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ.

ಏ.11ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೈಪಾಸ್ ಸರ್ಜರಿ ನಡೆಸುವ ಸಂಭವ ಇದೆ. ಪ್ರಸಕ್ತ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿ ಇರುವುದರಿಂದ ಅವರ ಭೇಟಿಗೆ ಯಾರಿಗೂ ಅವಕಾಶ ನೀಡಲಾಗಿಲ್ಲ.

ಏ.5ರಂದು ಕಲ್ಲಡ್ಕ ಶಾಲೆಯಲ್ಲಿ ಸಾರ್ವಜನಿಕ ಭೇಟಿ ವೇಳೆ ಕಡಿಮೆ ರಕ್ತ ದೊತ್ತಡ ಉಂಟಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆ್ಯಂಜಿಯೋಗ್ರಾಂ ಮಾಡಿದಾಗ ಬೈಪಾಸ್ ಸರ್ಜರಿಯ ಅನಿವಾರ್ಯತೆಯನ್ನು ವೈದ್ಯರು ತಿಳಿಸಿದ್ದರು.

By dtv

Leave a Reply

Your email address will not be published. Required fields are marked *

error: Content is protected !!