ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
![](http://dtvkannada.in/wp-content/uploads/2022/04/img_0159-1024x871.jpg)
ಬಂಧಿತರನ್ನು ಆರೋಪಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ (25), ಕುಮಾರ ಕಟ್ಟಿಮನಿ (26) ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ವ್ಯಾಪಾರ ನಡೆಸುತ್ತಿದ್ದ ನಬೀಸಾಬ್ ಗೌಸುಸಾಬ್ ಕಿಲ್ಲೇದಾರ, ಮೆಹಬೂಬ್ಸಾಬ್ ಮುಜಾವರ್, ಶರೀಫ್ ತಡಕೋಡ ಇವರ ಅಂಗಡಿಗಳನ್ನು ಗುಂಪು ದ್ವಂಸಗೊಳಿಸಿತ್ತು.
ಈ ಬಗ್ಗೆ ನಬೀಸಾಬ್ ಅವರಿಂದ ಹೇಳಿಕೆ ಪಡೆಯಲಾಗಿದೆ. ದಾಳಿ ನಡೆಸಿದ್ದಾರೆ ಎನ್ನಲಾದ 8 ರಿಂದ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.