ಮಂಗಳೂರು : ಖ್ಯಾತ ಯಕ್ಷಗಾನ ಭಾಗವತರಾದ ಬಲಿಪ ಪ್ರಸಾದ್ ಅವರು ನಿಧನರಾಗಿದ್ದಾರೆ. 45 ವರ್ಷದ ಬಲಿಪರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕಳೆದ ಹಲವು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ ಪ್ರಸಾದ್ ಬಲಿಪ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಲಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಬಲಿಪ ಪ್ರಸಾದ್ ನಿಧನಕ್ಕೆ ಯಕ್ಷಗಾನದ ಗಣ್ಯರು, ಅಭಿಮಾನಿಗಳು ಕಂಪನಿ ಮಿಡಿದಿದ್ದಾರೆ.