ಕಾಸರಗೋಡು: ಪಿಕಪ್ ವ್ಯಾನ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್ನಲ್ಲಿ ನಡೆದಿದೆ.
ಮೃತಪಟ್ಟ ದುರ್ದೈವಿಯನ್ನು ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ.
ಆತನ ಜೊತೆಗಿದ್ದ ಶಮೀಸ್ಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.
ಮೃತಪಟ್ಟ ಸಿದ್ದೀಕ್ ಇತ್ತೀಚಿಗೆ ಅಷ್ಟೆ ದುಬೈನಿಂದ ಊರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.