ಪಾಲಕ್ಕಾಡ್: ಆರ್ಎಸ್ಎಸ್ ಕಾರ್ಯಕರ್ತನೊಬ್ಬನನ್ನು ಮಾರಕಾಯುಧಗಳಿಂದ ಕಡಿದು ಹತ್ಯೆ ಮಾಡಿದ ಘಟನೆ ಪಾಲಕ್ಕಾಡ್ ಜಿಲ್ಲೆಯ ಮೇಲಿನ ಕೋಣೆಯಲ್ಲಿ ಇದೀಗ ನಡೆದಿದೆ.
ಮಾಜಿ ಕಾರ್ಪೊರೇಟರ್ ಎಸ್.ಕೆ.ಶ್ರೀನಿವಾಸನ್ ಅವರ ಮೇಲೆ ಮಾರಕಾಯುಧಗಳಿಂಗ ದಾಳಿ ಮಾಡಿ ಕೊಲೆಗೈಯ್ಯಲಾಗಿದೆ. ಪಾಲಕ್ಕಾಡ್ನ ತರಕಾರಿ ಮಾರುಕಟ್ಟೆಯ ಬಳಿ ಶ್ರೀನಿವಾಸನ್ನನ್ನು ದುಷ್ಕರ್ಮಿಗಳು ಕೊಚ್ಚಿ ಕೊಂದಿದ್ದಾರೆ. ಇದು ರಾಜಕೀಯ ಹತ್ಯೆಯೇ ಅಥವಾ ಯಾವುದಾದರೂ ವ್ಯವಹಾರದ ವಿಚಾರವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿನ್ನೆ ಪಾಪ್ಯುಲರ್ ಫ್ರಂಟ್ ಮುಖಂಡರೊಬ್ಬರ ಗ
ಹತ್ಯೆ ನಡೆದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಇದೇ ವೇಳೆ ಆರ್ಎಸ್ಎಸ್ ಕಾರ್ಯಕರ್ತನ ಕೊಲೆ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಬಂದ ಐವರು ದುಷ್ಕರ್ಮಿಗಳು ನಡುರಸ್ತೆಯಲ್ಲೇ ದಾಳಿ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ ಆಸ್ಪತ್ರೆಯಲ್ಲಿ ಹಿಂದಿನ ದಿನ ಕೊಲೆಗೈಯ್ಯಲ್ಪಟ್ಟ ಪಾಪ್ಯುಲರ್ ಫ್ರಂಟ್ ನಾಯಕನ ಪ್ರಾರ್ಥಿವ ಶರೀರವಿದ್ದ ಕಾರಣ ಆಸ್ಪತ್ರೆಯ ಮುಂಭಾಗ ಹಲವಾರು ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ಹಾಜರಿದ್ದರು. ಆದ್ದರಿಂದ ಅವರನ್ನು ಪಾಲಕ್ಕಾಡ್ನ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ನಿನ್ನೆ ನಡೆದ PFI ನಾಯಕನ ಕೊಲೆಯತ್ನಕ್ಕೆ ಪ್ರತಿಕಾರವಾಗಿ ಈ ಕೊಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.