dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಈಶ್ವರಮಂಗಳ ಪಾಳ್ಯತ್ತಡ್ಕ ಜಮಾಅತ್’ಗೆ ಒಳಪಟ್ಟ ಮುಗುಳಿ ಮಹಮ್ಮದ್ ರವರ ಮಗ ಉಮ್ಮರ್ ಸಿ.ಎಚ್ (28) ರವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತ ಯುವಕ ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಬೆಂಗಳೂರಿನಿಂದ ಬಸ್ಸಿನಲ್ಲಿ ಹೊರಟು ಇಂದು ಬೆಳಗ್ಗೆಯಷ್ಟೇ ಊರಿಗೆ ತಲುಪಿದ್ದರು.

'; } else { echo "Sorry! You are Blocked from seeing the Ads"; } ?>

ಮನೆಗೆ ಬಂದು ತಲುಪುವಷ್ಟರಲ್ಲಿ ಡಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡುಹೋಗಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಾಗ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ತಿಳಿದು ಬಂದಿದೆ.

ಮೃತರ ಗೌರವಾರ್ಥವಾಗಿ ಹಲವು ಸಂಘಟನೆಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ತಂದೆ-ತಾಯಿ, ಸಹೋದರ-ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!