dtvkannada

'; } else { echo "Sorry! You are Blocked from seeing the Ads"; } ?>

ಹೆಬ್ರಿ: ತಾನು ಪ್ರೀತಿಸಿದ ಹುಡುಗ ಇನ್ಮುಂದೆ ತನಗೆ ಸಿಗುವುದಿಲ್ಲವೆಂದು ನೊಂದ ಯುವತಿ ಇಲಿ ಪಾಷಾಣ ಸೇವಿಸಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಯುವತಿಯನ್ನು ಕುಸುಮಾ (19) ಎಂದು ಗುರುತಿಸಲಾಗಿದೆ.

ಘಟನೆ ವಿವರ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಸುಮಾ ಎಂಬಾಕೆ ತನ್ನದೇ ಊರಿನ ರಾಹುಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

'; } else { echo "Sorry! You are Blocked from seeing the Ads"; } ?>

ಹೋಂ ನರ್ಸಿಂಗ್ ಕೆಲಸದ ನಿಮಿತ್ತ ತಿಂಗಳ ಹಿಂದೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಿಯತಮ ರಾಹುಲ್‌ ತನ್ನ ಫೋನ್‌ ಕರೆ ಸ್ವೀಕರಿಸುತ್ತಿಲ್ಲ ಹಾಗೂ ಇನ್ನು ಮುಂದಕ್ಕೆ ಆತನು ತನಗೆ ಸಿಕ್ಕುವುದಿಲ್ಲವೆಂದು ಬೇಸರಗೊಂಡು ಏ.11 ರಂದು ಇಲಿಪಾಷಾಣವನ್ನು ಹಾಲಿನಲ್ಲಿ ಬೆರೆಸಿ ಸೇವಿಸಿದ್ದಾಳೆ.

ಅಸ್ವಸ್ಥಗೊಂಡ ಆಕೆಯನ್ನು ಮನೆಯವರು ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಏ.17ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!