ಉಳ್ಳಾಲ: ಮಂಗಳೂರಿಗೆ ಕೇರಳ ಭಾಗದಿಂದ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ರಿಕ್ಷಾವೊಂದನ್ನು ಮಂಗಳೂರಿನ ಉಳ್ಳಾಲ ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.
![](http://dtvkannada.in/wp-content/uploads/2022/04/IMG-20220419-WA0034.jpg)
ಬಂಧಿತ ಆರೋಪಿಯು ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32)ಎಂದು ತಿಳಿದು ಬಂದಿದೆ.
ಆರೋಪಿ ರಿಯಾಝ್ ಕೇರಳದಿಂದ ಮಂಗಳೂರು ಭಾಗದಲ್ಲಿ ಮಾರಾಟ ಮಾಡಲು ಸುಮಾರು 365 ಕೆ.ಜಿ. ದನದ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಖಚಿತಿ ಮಾಹಿತಿ ಪೊಲೀಸರಿಗೆ ಬಂದಿತ್ತು.
ಈ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಅಸೈಗೋಳಿ ಬಳಿ ಅಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ದನದ ಮಾಂಸ ಪತ್ತೆಯಾಗಿದೆ.
ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಹಾಗೂ ಆಟೋ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.