dtvkannada

ಮಂಗಳೂರು: ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಸೈಡ್ ಕೊಡುವ ಭರದಲ್ಲಿ ಮಗುಚಿಬಿದ್ದ ಪರಿಣಾಮ ಲಾರಿಯ ಮೇಲಿದ್ದ ಹಿಟಾಚಿ ಚರಂಡಿಗೆ ಮಗುಚಿ ಬಿದ್ದಿದೆ.

ಈ ಘಟನೆ ಮಂಗಳೂರು ಹೊರವಲಯದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವಿನಲ್ಲಿ ಸಂಭವಿಸಿದೆ.

ಎಡಪದವು ವಿವೇಕಾನಂದ ಪಿಯು ಕಾಲೇಜಿನ ಬಳಿ ಈ ದುರ್ಘಟನೆ ಸಂಭವಿಸಿದ್ದು ದುರ್ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

ಮಂಗಳೂರು ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಬೃಹತ್ ಗಾತ್ರದ ಹಿಟಾಚಿಯನ್ನು ಹೊತ್ತೊಯ್ಯುತ್ತಿದ್ದ ಲಾರಿ
ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಸೈಡ್ ನೀಡಲು ಹೋಗಿ ಈ ಅಫಘಾತ ಸಂಭವಿಸಿದೆ.

By dtv

Leave a Reply

Your email address will not be published. Required fields are marked *

error: Content is protected !!