dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ನಗರ ಹೊರವಲಯದ ರಾ.ಹೆ‌.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ‌ಮೃತಪಟ್ಟ ಮೃತಪಟ್ಟಿದ್ದಾರೆ.ಮೃತಪಟ್ಟ ಸ್ಕೂಟರ್‌ ಸವಾರನನ್ನು ರೊನಾಲ್ಡ್ (59) ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಕಾರ್ಯನಿಮಿತ್ತ ಮಂಗಳೂರು ನಗರಕ್ಕೆ ಆಗಮಿಸಿ ಕೊಣಾಜೆಯಲ್ಲಿರುವ ತನ್ನ ಮನೆಗೆ ರೊನಾಲ್ಡ್ ಮರಳುತ್ತಿದ್ದಾಗ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿಯು ಸ್ಕೂಟರ್‌ನ ಹಿಂಬದಿಗೆ ಢಿಕ್ಕಿ ಹೊಡೆದಿದೆ.

ಇದರಿಂದ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಲಾರಿಯು ಮೊದಲು ಕಾರಿಗೆ ಢಿಕ್ಕಿ ಹೊಡೆದಿದ್ದು, ಬಳಿಕ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇನ್ನು ಇದೇ ವೇಳೆ ಅದೇ ದಾರಿಯಾಗಿ ಸಾಗುತ್ತಿದ್ದ ಯು.ಟಿ ಖಾದರ್ ಅವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಸದ್ಯ ಮಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!