ವಿಟ್ಲ : ಬಲು ದೊಡ್ಡ ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.
![](http://dtvkannada.in/wp-content/uploads/2022/04/IMG-20220427-WA0055-1024x532.jpg)
ಮೃತಪಟ್ಟ ವ್ಯಕ್ತಿ ಲಕ್ಕೋ ಪಿಪ್ರಾ ಗೂಮ್ ಮೂಲದ ಮೂಲದ ಕಾರ್ಮಿಕ ಜಯ ಪ್ರಕಾಶ್ ( 25 ) ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆ ಅಧೀನಕ್ಕೊಳಪಟ್ಟ ಸಭಾಭವನದ ಮುಕ್ತಾಯ ಹಂತದ ಕೆಲಸ ಮಾಡುತ್ತಿದ್ದ ಸಂದರ್ಭ ಈತ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದನು.
![](http://dtvkannada.in/wp-content/uploads/2022/04/IMG-20220427-WA0054.jpg)
ಆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.