dtvkannada

ಮಡಿಕೇರಿ : ಈದ್ ಹಬ್ಬದ ಪ್ರಯುಕ್ತ ಕುಟುಂಬಿಕರ ಮನೆಗೆ ಬಂದಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.

ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕ ನಾಸಿರ್ ಪಾಷ ಹಾಗೂ ಪಝೀಯಾ ಭಾನು ಅವರ ಪುತ್ರ ಫರ್ಹಾನ್ ( 12 )ಎಂದು ವರದಿಯಾಗಿದೆ.

ಮೃತಪಟ್ಟ ಬಾಲಕ 7 ನೇ ತರಗತಿಯಲ್ಲಿ ಕಲಿಯುತ್ತಿದ್ದು
ರಂಝಾನ್ ಹಬ್ಬದ ಹಿನ್ನೆಲೆಯಲ್ಲಿ ಬೈಲ್ ಕೊಪ್ಪದಿಂದ ಶನಿವಾರಸಂತೆಯಲ್ಲಿರುವ ಅಜ್ಜ – ಅಜ್ಜಿಯ ಮನೆಗೆ ಬಂದಿದ್ದನೆಂದು ತಿಳಿದು ಬಂದಿದೆ.

ಶನಿವಾರಸಂತೆಯಲ್ಲಿ ಕಲ್ಲಂಗಡಿ ವ್ಯಾಪಾರ ಮಾಡುತ್ತಿದ್ದ ಮಾವನ ಅಂಗಡಿಯಲ್ಲಿ ಸಂಜೆಯವರೆಗೆ ಇದ್ದ ಪರ್ಹಾನ್
ಸಂಜೆ 5 ಗಂಟೆ ಸುಮಾರಿಗೆ ಮಾವನ ಮಗನೊಂದಿಗೆ ಶನಿವಾರಸಂತೆಯ ಹೆಮ್ಮನೆಯಲ್ಲಿರುವ ಹೊಳೆಯಲ್ಲಿ ಈಜಲು ತೆರಳಿದ್ದಾನೆ.

ಹೊಳೆಯ ಬದಿಯ ಕಲ್ಲಿನಲ್ಲಿ ಪಾಚಿ ಕಟ್ಟಿದ್ದರಿಂದ ಕಾಲು ಜಾರಿ ಫರ್ಹಾನ್ ನೀರಿಗೆ ಬಿದ್ದಿದ್ದಾನೆ . ಎಷ್ಟೇ ಹೊತ್ತಾದರೂ ನೀರಿನಿಂದ ಮೇಲೆ ಬಾರದ ಹಿನ್ನೆಲೆಯಲ್ಲಿ ಮಾವನ ಮಗ ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ.

ರಾತ್ರಿ ಪೂರ್ತಿ ಹುಡುಕಾಟ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ.ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆಯೆಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!