dtvkannada

ತುಮಕೂರು: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಟಿಟಿ ವಾಹನಕ್ಕೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು ಇಬ್ಬರು ಮೃತಪಟ್ಟು ಐವರು ಗಾಯಗೊಂಡ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ.

ರಘು (27), ಸಂತೋಷ್ (21) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಸಂಜಯ್ ನಗರದ ನಿವಾಸಿಗಳಾಗಿದ್ದಾರೆ. ದುರ್ಘಟನೆಯಲ್ಲಿ ವಿಜಯ್ (30) ಎಂಬಾತನ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು ಕಡೆಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಟಿಟಿ ವಾಹನ ಹಾಗೂ ಚಿಕ್ಕಮಗಳೂರು ಕಡೆಯಿಂದ ತೆರಳುತ್ತಿದ್ದ ಕಾರು ತುಮುಕೂರಿನ ಕುಣಿಗಲ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಟಿ ವಾಹನಕ್ಕೆ ಮುಖಾಮುಖಿ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

By dtv

Leave a Reply

Your email address will not be published. Required fields are marked *

error: Content is protected !!