dtvkannada

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ರೂ ಹಾಗೂ 6ರೂ ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 9.5, ಡೀಸೆಲ್ ಬೆಲೆ 7 ರೂಗಳಷ್ಟು ಇಳಿಕೆಯಾಗಲಿದೆ ಎಂದು ಹಣಕಾಸು ಸಚಿವೆ ತಿಳಿಸಿದ್ದಾರೆ.

ಅಡುಗೆ ಸಿಲಿಂಡರ್‌ಗೆ 200 ರೂಪಾಯಿ ಸಹಾಯಧನ!
ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್ ಬಳಸುವವರಿಗೂ ಗುಡ್‌ ನ್ಯೂಸ್‌ ನೀಡಿದೆ ಕೇಂದ್ರ ಸರ್ಕಾರ. ಆದರೆ ಇದು ಉಜ್ವಲ ಯೋಜನೆಯಡಿ ಸಿಲಿಂಡರ್ ಬಳಸುವವರಿಗೆ ಮಾತ್ರ ಅನ್ವಯವಾಗಲಿದೆ. ಅದರಂತೆ ಪ್ರತಿ ಅಡುಗೆ ಅನಿಲ ಸಿಲಿಂಡರ್‌ಗೆ 200 ರೂಪಾಯಿ ಸಹಾಯಧನ ದೊರೆಯಲಿದೆ.

By dtv

Leave a Reply

Your email address will not be published. Required fields are marked *

error: Content is protected !!