dtvkannada

ಪುತ್ತೂರು: ಮರ ಕುಡಿಯುತ್ತಿದ್ದ ಸಂದರ್ಭ ಮರದ ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ತಾಗಿ ಮರಕಡಿಯುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರಿನಲ್ಲಿ ಇಂದು ನಡೆದಿದೆ.

ಮೃತಪಟ್ಟ ವ್ಯಕ್ತಿ ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ ( 35 ) ಎಂದು ಗುರುತಿಸಲಾಗಿದೆ.ಮೃತರು ಹಲವು ವರ್ಷಗಳಿಂದ ಮರ ಕಡಿಯುವ ವೃತ್ತಿಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು

ಮರ ಕಡಿಯುವ ವೃತ್ತಿಯನ್ನು ಮಾಡುತ್ತಿದ್ದ ವಸಂತ ಗುರುವಾರದಂದು ಪುತ್ತೂರಿನ ನರಿಮೊಗರು ಭಾಗದಲ್ಲಿರುವ ಐಟಿಐ ಸಮೀಪದಲ್ಲಿ ಕೆಲಸ ಮಾಡುತ್ತಿದ್ದರು.

ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರ ವಿದ್ಯುತ್ ತಂತಿಯ ಮೇಲೆ ಬಿದ್ದು ವಿದ್ಯುತ್ ಶಾಕ್ ಹೊಡೆದು ಗಂಭೀರಾವಸ್ಥೆಯಲ್ಲಿದ್ದ ವಸಂತರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ವಿವಾಹಿತರಾಗಿದ್ದು ಪತ್ನಿ ಎರಡು ವರ್ಷ ಪ್ರಾಯದ ಗಂಡು ಹಾಗೂ 9 ತಿಂಗಳು ಪ್ರಾಯದ ಹೆಣ್ಣು ಮಗು ಇದ್ದು ಮೃತರು ತಂದೆ , ತಾಯಿ ಈರ್ವರು ಸಹೋದರಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!