dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ರಾಜ್ಯ ಸರಕಾರದ ಅರಾಜಕತೆಯ ಆಡಳಿತ ಹಾಗೂ ವಿರೋಧ ಪಕ್ಷದ ವೈಫಲ್ಯದ ವಿರುದ್ಧ SDPI ವತಿಯಿಂದ ಮಂಗಳೂರಿನ ಅಡ್ಯಾರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ಕಾರ್ಯಕ್ರಮವು ಶುಕ್ರವಾರ ಅಪರಾಹ್ನ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಮಾತನಾಡಿ, ಸಂಘಪರಿವಾರದ ಚಡ್ಡಿಗಳೇ ಧಂ ಇದ್ರೆ, ತಾಕತ್ತಿದ್ರೆ ಬಳ್ಳಾರಿಯಲ್ಲಿ ನಿಮ್ಮದೇ ನಾಯಕ ಜನಾರ್ದನ ರೆಡ್ಡಿ 200 ವರ್ಷ ಹಳೆಯದಾದ ದೇವಸ್ಥಾನ ಒಡೆದ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಕೇಳಿ. ಇಲ್ಲಿ ವ್ಯಾಪಾರ ಬಹಿಷ್ಕಾರ ಮಾಡಿ, ನಿಮ್ಮ ಗುರು ಬೊಮ್ಮಾಯಿ ಯೂಸಫ್‌ ಅಲಿ ಜೊತೆ 2 ಸಾವಿರ ಕೋಟಿ ಒಪ್ಪಂದ ಮಾಡಿದಾಗ ನಾಚಿಕೆಯಾಗಲ್ವಾ ಎಂದು ಪ್ರಶ್ನಿಸಿದರು.

'; } else { echo "Sorry! You are Blocked from seeing the Ads"; } ?>

ಬೃಹತ್‌ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಅವರು, 2006ರ ಸೆ.3.ರಂದು ಬಳ್ಳಾರಿಯ ಸಂಡೂರಿನಲ್ಲಿ 200 ವರ್ಷದ ಹಳೆಯದಾದ ಸುಗ್ಗುಲಮ್ಮ ದೇವಸ್ಥಾನವನ್ನು ಬಾಂಬ್‌ ಇಟ್ಟು ಒಡೆದು ಹಾಕಿ, ದೇವಿಯ ವಿಗ್ರಹ ನಾಶ ಮಾಡಿದ್ದು ನಿಮ್ಮದೇ ಬಿಜೆಪಿ ನಾಯಕ ಜನಾರ್ದನ ರೆಡ್ಡಿ. ಈಗ ನಿಮಗೆ ತಾಕತ್ತಿದ್ದರೆ ತಾಂಬೂಲ ಪ್ರಶ್ನೆ ಕೇಳಿ, ರೆಡ್ಡಿ ಮನೆಗೆ ಪಾದಾಯಾತ್ರೆ ಮಾಡಿ. ಈ ಬಗ್ಗೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ತಮ್ಮ ಬೆತ್ತಲೆ ಪ್ರಪಂಚ ಪುಸ್ತಕದಲ್ಲಿ ಬರೆದಿದ್ದಾರೆ.

ಒಂದು ನೆನಪಿಡಿ ಮಳಲಿ ಮಸೀದಿಯ ಜಾಗದ ಒಂದು ಹಿಡಿ ಮರಳು ನಿಮಗೆ ಸಿಗಲಿಕ್ಕಿಲ್ಲ. ಆರ್‌ಎಸ್‌ಎಸ್‌ ಆಟಾಟೋಪಕ್ಕೆ ಕಾಂಗ್ರೆಸ್‌-ಜೆಡಿಎಸ್‌ ಬೆದರಬಹುದು ನಿಮ್ಮ ಆಟಕ್ಕೆ ಬೆದರುವ ಮಕ್ಕಳು ನಾವಲ್ಲ. ಬೊಮ್ಮಾಯಿ ಅಧಿಕಾರಕ್ಕೆ ಬಂದ ನಂತರ ನಾಗ್ಪುರದ ಅಜೆಂಡಾವನ್ನು ಜಾರಿಗೆ ತರಲು ಯತ್ನಿಸುತ್ತಿದ್ದಾರೆ.
ಇಲ್ಲಿ ಮುಸ್ಲಿಮರಿಗೆ ವ್ಯಾಪಾರ ಬಹಿಷ್ಕಾರ ಹಾಕುವ ನಿಮ್ಮ ಗುರು ಇದೇ ಬೊಮ್ಮಾಯಿ ಯೂಸಫ್‌ ಅಲಿ ಎಂಬ ಬ್ಯಾರಿಯೊಂದಿಗೆ 2 ಸಾವಿರ ಕೋಟಿಯ ವ್ಯವಹಾರಕ್ಕೆ ಸಹಿ ಹಾಕುತ್ತಾರೆ.
ನಾಚಿಕೆಯಾಗುದಿಲ್ವಾ, ನಿಮ್ಮ ಬಹಿಷ್ಕಾರ ಬಡ ಮುಸ್ಲಿಂಮನ ಮೇಲಾ, ನಿಮಗೆ ಯೂಸಫ್‌ ಅಲಿ ಪರ್ಸೆಂಟ್‌ ಕೊಡ್ತಾರೆ. ಮಂಗಳೂರು ಎನ್‌ಆರ್‌ಸಿ ಪ್ರತಿಭಟನೆ ವೇಳೆ ಗುಂಡು ಹಾರಿಸಲು ಸಾಧ್ಯವಾ ಗುವುದಾದರೆ, ಶಿವಮೊಗ್ಗದಲ್ಲಿ 144 ಸೆಕ್ಷನ್‌ ವೇಳೆ ಮುಸ್ಲಿಂ ಅಂಗಡಿಗಳ ಮೇಲೆ ಸಂಘಪರಿವಾರದ ಗೂಂಡಾಗಳು ದಾಳಿ ನಡೆಸುವಾಗ ಪೊಲೀಸರೇ ನಿಮ್ಮ ಬಂದೂಕಿನಲ್ಲಿ ಗುಂಡುಗಳು ಇರಲಿಲ್ಲವೇ ಎಂದು ಪ್ರಶ್ನಿಸಿದ ಅವರು ಈ ಜನಾಧಿಕಾರ ಸಮಾವೇಶ ರಾಜ್ಯದ ವಿವಿಧ ಜಿಲ್ಲೆಯಲ್ಲಿ ನಡೆಯಲಿದೆ ಎಂದರು.

'; } else { echo "Sorry! You are Blocked from seeing the Ads"; } ?>

ಕಾರ್ಯಕ್ರಮವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಇಲ್ಯಾಸ್ ಮುಹಮ್ಮದ್ ತುಂಬೆ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ SDPI ಕೇರಳ ರಾಜ್ಯಾಧ್ಯಕ್ಷರಾದ ಅಶ್ರಫ್ ಮೌಲಾವಿ ಮುವಾಟ್ಟುಪುಝ, SDPI ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ನಂಜಯ್ಯ, CFI ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪೂಂಜಲಕಟ್ಟೆ , SDPI ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಲಾಯಿ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.

SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಮುಖ್ಯ ಭಾಷನಗೈದರು.
SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್‌ ಫರಂಗಿಪೇಟೆ ಮಾತನಾಡಿ, ದೇಶದಲ್ಲಿ ನಡೆಯುವ ಕೋಮುವಾದ ಆಟಾಟೋಪಗಳನ್ನು ನೋಡಿ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಟ್ಟೆ ಕಟ್ಟಿಕೊಂಡಿದ್ದಾರೆ. ಒಂದಲ್ಲ ಒಂದು ದಿನ ನಿಮ್ಮ ಕಣ್ಣಿನ ಬಟ್ಟೆ ಬಿಚ್ಚಿ ಬೀದಿಯಲ್ಲಿ ಅಟ್ಟಾಡಿಸಿ ಹೊಡೆಯುವ ದಿನಗಳು ದೂರವಿಲ್ಲ.
ಶ್ರೀಲಂಕಾ ಉದಾಹರಣೆಯಾಗಿ ನೋಡಿ ಎಲ್ಲಿ ಅನೀತಿ, ಕೋಮುವಾದ ಹೆಚ್ಚಾದಾಗ ಆಡಳಿತ ವ್ಯವಸ್ಥೆಯ ವಿರುದ್ಧ ದಂಗೆ ಏಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಅಬ್ದುಲ್ ಲತೀಫ್, ಅಲ್ಫೊನ್ಸ್ ಫ್ರಾಂಕೋ, ಶಾಫಿ ಬೆಳ್ಳಾರೆ,ಆಯಿಶಾ ಬಜಪೆ, ಶಾಹಿದಾ ತಸ್ನೀಮ್, ಫರ್ಝಾನ ಮುಹಮ್ಮದ್, ಝೀನತ್ ಬಂಟ್ವಾಳ, ಹಾಗೂ ಜಿಲ್ಲಾ ರಾಜ್ಯ ನಾಯಕರು ಉಪಸ್ಥಿರಿದ್ದರು.
ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಭಾಗವಹಿಸಿದ್ದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!